July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

ಬೆಳ್ತಂಗಡಿ: ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ರಾಜ್ಯದ ಅತ್ಯುನ್ನತ ಕಲಾವಿದ, ಆಕಾಶವಾಣಿ ಮತ್ತು ದೂರದರ್ಶನದ ಎ ಗ್ರೇಡ್ ಕಲಾವಿದರೂ ಆಗಿರುವ ಧರ್ಮಸ್ಥಳ ಬಿ ಪ್ರಕಾಶ ದೇವಾಡಿಗರಿಗೆ ಅಮೇರಿಕಾದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಮನ್ನಣೆ ದೊರೆತಿದೆ. ಅಮೇರಿಕಾದ ಫಿನಿಕ್ಸ್‌ನ ಪುತ್ತಿಗೆ ಮಠದ ಪೀಠಾದಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅವರ ಮೂರನೇ ಬಾರಿಯ ಅಮೇರಿಕಾ ಕಲಾ ಪ್ರವಾಸದ ವೇಳೆ ನೀಡಿದ ಕಲಾ ಸೇವೆಯನ್ನು ಗೌರವಿಸಿ ಈ ಪುರಸ್ಕಾರ ಪತ್ರ‌ ನೀಡಿ ಅಭಿನಂದಿಸಿದರು.

ಅಮೆರಿಕಾದ ಅರಿಝೇನಾ ಎಂಬಲ್ಲಿರುವ ಸುಜ್ಞಾನ ರಿಲಿಜಿಯಸ್ ಎಂಡ್ ಚಾರಿಟೇಬಲ್ ಫೌಂಡೇಶನ್ ವೆಂಕಟಕೃಷ್ಣ ದೇವಸ್ಥಾನದಲ್ಲಿ ಅ.28 ರಿಂದ ನ.4 ರ ವರೆಗೆ ನಡೆದ ‘ ಶ್ರೀ ಯಜುರ್ವೇದ ಸಂಹಿತ ಯಾಗ’ ಮತ್ತು ‘ಸಹಸ್ರ ಅತರ್ವ ಶ್ರೀರ್ಶ ಮಹಾಗಣಪತಿ ಯಾಗ’ ಕಾರ್ಯಕ್ರಮದಲ್ಲಿ ಪ್ರಕಾಶ ದೇವಾಡಿಗ ಅವರು ಭಾರತೀಯ ಸಾಂಪ್ರದಾಯಿಕ ಸ್ಯಾಕ್ಸೋಫೋನ್ ವಾದನವನ್ನು ಮನೋಜ್ಞವಾಗಿ ನಡೆಸಿಕೊಟ್ಟಿದ್ದರು.ಅವರು ಈ ಬಾರಿ ಭಾರತದಿಂದ ಆಹ್ವಾನಿತರಾಗಿ ಅಮೆರಿಕಕ್ಕೆ ಮೂರನೇ ಬಾರಿಗೆ ಪ್ರಯಾಣ ಕೈಗೊಂಡಿದ್ದರು. ಸ್ವಾಮೀಜಿಗಳು ಪುರಸ್ಕಾರ ಪ್ರದಾನ‌ ಮಾಡುವ ವೇಳೆ ಮಠದ ಪ್ರಧಾನ ಅರ್ಚಕ ಕಿರಣ್ ರಾವ್‌ ಉಜಿರೆ ಹಾಗೂ ಸ್ವಾಮೀಜಿಗಳ ಧಾರ್ಮಿಕ ಕೈಂಕರ್ಯದ ಪರಿವಾರ ಬಂಧುಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
error: Content is protected !!