ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ಖಜಾಂಚಿಯಾಗಿ ಜಗದೀಶ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಸ್ಮಾ, ಉಪಾಧ್ಯಕ್ಷರಾಗಿ ಹರ್ಷಿತ್ ಕುಮಾರ್ ಹೆಚ್. ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಭಿನ್ ಫ್ರಾನ್ಸಿಸ್, ಇರ್ಷಾದ್, ಲಿಖಿತ ಕೆ. ಬಿ, ಸಂದೇಶ್ ಕುಮಾರ್,ಉಷಾ ಎನ್. ಜಿ., ವಿನೋಧರ,ಜೋಬಿ ಜೋಯ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜೆ. ಕೆ ಪೌಲ್, ಶಶಿಕಿರಣ್ ಜೈನ್, ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ್ ಎಂ ಉಪಸ್ಥಿತರಿದ್ದರು.

ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿದರು. ಕಾರ್ಯದರ್ಶಿ ಜೋಸ್ನಾ ವೆಲೋನ ಕೊರೆಯ ವಂದಿಸಿದರು.

Leave a Comment

error: Content is protected !!