25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ.

ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ, ಅವರ ಪರಿಚಯಸ್ಥರಾದ ಸಿದ್ಧಿಕ್ ಎಂಬಾತ ಅಂದಾಜು ರೂ.8000 ಮೌಲ್ಯದ ಮೊಬೈಲನ್ನು ಕದ್ದು, ಬಳಿಕ ಸದ್ರಿ ಮೊಬೈಲ್‌ನಲ್ಲಿ, ಪೋನ್‌ ಪೇ ಮುಖಾಂತರ ಅವರ ಖಾತೆಯಲ್ಲಿದ್ದ ರೂ 64.000/- ಹಣದ ಪೈಕಿ, ರೂ 34.000/- ರೂ ಹಣವನ್ನು ಜಾಪರ್‌ ಎಂಬಾತನಿಗೂ, ರೂ 25.000/- ಹಣವನ್ನು ಮಹಮ್ಮದ್‌ ಎಂಬಾತನಿಗೂ ಹಾಗೂ ರೂ 2000/- ಹಣವನ್ನು ಸಿರಾಜ್‌ ಎಂಬಾತನಿಗೂ ವರ್ಗಾವಣೆ ಮಾಡಿದ್ದಾನೆ. ಆರೋಪಿಗಳು ಅಭಿದಾಬಾನು ರವರ ಗಂಡನ ಸ್ನೇಹಿತರಾಗಿರುವುದರಿಂದ ಮೊಬೈಲ್‌ ಮತ್ತು ಹಣವನ್ನು ವಾಪಸು ನೀಡಬಹುದೆಂದು ಕಾದಿದ್ದು, ಈವರೆಗೆ ವಾಪಾಸ್ ನೀಡದಿರುವ ಹಿನ್ನೆಲೆಯಲ್ಲಿ ನ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಠಾಣೆಯಲ್ಲಿ ಅಕ್ರ ನಂ 116/2023 ಕಲಂ; 380,411ಭಾ ದಂ ಸಂ ಪ್ರಕರಣ ದಾಖಲಿಸಿದ್ದಾರೆ.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
error: Content is protected !!