April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ.

ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ, ಅವರ ಪರಿಚಯಸ್ಥರಾದ ಸಿದ್ಧಿಕ್ ಎಂಬಾತ ಅಂದಾಜು ರೂ.8000 ಮೌಲ್ಯದ ಮೊಬೈಲನ್ನು ಕದ್ದು, ಬಳಿಕ ಸದ್ರಿ ಮೊಬೈಲ್‌ನಲ್ಲಿ, ಪೋನ್‌ ಪೇ ಮುಖಾಂತರ ಅವರ ಖಾತೆಯಲ್ಲಿದ್ದ ರೂ 64.000/- ಹಣದ ಪೈಕಿ, ರೂ 34.000/- ರೂ ಹಣವನ್ನು ಜಾಪರ್‌ ಎಂಬಾತನಿಗೂ, ರೂ 25.000/- ಹಣವನ್ನು ಮಹಮ್ಮದ್‌ ಎಂಬಾತನಿಗೂ ಹಾಗೂ ರೂ 2000/- ಹಣವನ್ನು ಸಿರಾಜ್‌ ಎಂಬಾತನಿಗೂ ವರ್ಗಾವಣೆ ಮಾಡಿದ್ದಾನೆ. ಆರೋಪಿಗಳು ಅಭಿದಾಬಾನು ರವರ ಗಂಡನ ಸ್ನೇಹಿತರಾಗಿರುವುದರಿಂದ ಮೊಬೈಲ್‌ ಮತ್ತು ಹಣವನ್ನು ವಾಪಸು ನೀಡಬಹುದೆಂದು ಕಾದಿದ್ದು, ಈವರೆಗೆ ವಾಪಾಸ್ ನೀಡದಿರುವ ಹಿನ್ನೆಲೆಯಲ್ಲಿ ನ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಠಾಣೆಯಲ್ಲಿ ಅಕ್ರ ನಂ 116/2023 ಕಲಂ; 380,411ಭಾ ದಂ ಸಂ ಪ್ರಕರಣ ದಾಖಲಿಸಿದ್ದಾರೆ.

Related posts

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya
error: Content is protected !!