ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ.

ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ, ಅವರ ಪರಿಚಯಸ್ಥರಾದ ಸಿದ್ಧಿಕ್ ಎಂಬಾತ ಅಂದಾಜು ರೂ.8000 ಮೌಲ್ಯದ ಮೊಬೈಲನ್ನು ಕದ್ದು, ಬಳಿಕ ಸದ್ರಿ ಮೊಬೈಲ್‌ನಲ್ಲಿ, ಪೋನ್‌ ಪೇ ಮುಖಾಂತರ ಅವರ ಖಾತೆಯಲ್ಲಿದ್ದ ರೂ 64.000/- ಹಣದ ಪೈಕಿ, ರೂ 34.000/- ರೂ ಹಣವನ್ನು ಜಾಪರ್‌ ಎಂಬಾತನಿಗೂ, ರೂ 25.000/- ಹಣವನ್ನು ಮಹಮ್ಮದ್‌ ಎಂಬಾತನಿಗೂ ಹಾಗೂ ರೂ 2000/- ಹಣವನ್ನು ಸಿರಾಜ್‌ ಎಂಬಾತನಿಗೂ ವರ್ಗಾವಣೆ ಮಾಡಿದ್ದಾನೆ. ಆರೋಪಿಗಳು ಅಭಿದಾಬಾನು ರವರ ಗಂಡನ ಸ್ನೇಹಿತರಾಗಿರುವುದರಿಂದ ಮೊಬೈಲ್‌ ಮತ್ತು ಹಣವನ್ನು ವಾಪಸು ನೀಡಬಹುದೆಂದು ಕಾದಿದ್ದು, ಈವರೆಗೆ ವಾಪಾಸ್ ನೀಡದಿರುವ ಹಿನ್ನೆಲೆಯಲ್ಲಿ ನ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಠಾಣೆಯಲ್ಲಿ ಅಕ್ರ ನಂ 116/2023 ಕಲಂ; 380,411ಭಾ ದಂ ಸಂ ಪ್ರಕರಣ ದಾಖಲಿಸಿದ್ದಾರೆ.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya
error: Content is protected !!