July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ.

ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ, ಅವರ ಪರಿಚಯಸ್ಥರಾದ ಸಿದ್ಧಿಕ್ ಎಂಬಾತ ಅಂದಾಜು ರೂ.8000 ಮೌಲ್ಯದ ಮೊಬೈಲನ್ನು ಕದ್ದು, ಬಳಿಕ ಸದ್ರಿ ಮೊಬೈಲ್‌ನಲ್ಲಿ, ಪೋನ್‌ ಪೇ ಮುಖಾಂತರ ಅವರ ಖಾತೆಯಲ್ಲಿದ್ದ ರೂ 64.000/- ಹಣದ ಪೈಕಿ, ರೂ 34.000/- ರೂ ಹಣವನ್ನು ಜಾಪರ್‌ ಎಂಬಾತನಿಗೂ, ರೂ 25.000/- ಹಣವನ್ನು ಮಹಮ್ಮದ್‌ ಎಂಬಾತನಿಗೂ ಹಾಗೂ ರೂ 2000/- ಹಣವನ್ನು ಸಿರಾಜ್‌ ಎಂಬಾತನಿಗೂ ವರ್ಗಾವಣೆ ಮಾಡಿದ್ದಾನೆ. ಆರೋಪಿಗಳು ಅಭಿದಾಬಾನು ರವರ ಗಂಡನ ಸ್ನೇಹಿತರಾಗಿರುವುದರಿಂದ ಮೊಬೈಲ್‌ ಮತ್ತು ಹಣವನ್ನು ವಾಪಸು ನೀಡಬಹುದೆಂದು ಕಾದಿದ್ದು, ಈವರೆಗೆ ವಾಪಾಸ್ ನೀಡದಿರುವ ಹಿನ್ನೆಲೆಯಲ್ಲಿ ನ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಠಾಣೆಯಲ್ಲಿ ಅಕ್ರ ನಂ 116/2023 ಕಲಂ; 380,411ಭಾ ದಂ ಸಂ ಪ್ರಕರಣ ದಾಖಲಿಸಿದ್ದಾರೆ.

Related posts

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!