23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ.

ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ನ.9ರಂದು ಬೆಳಿಗ್ಗೆ ಮನೆಯಲ್ಲಿ ಇರದಿದ್ದ ವೇಳೆ, ಅವರ ಪರಿಚಯಸ್ಥರಾದ ಸಿದ್ಧಿಕ್ ಎಂಬಾತ ಅಂದಾಜು ರೂ.8000 ಮೌಲ್ಯದ ಮೊಬೈಲನ್ನು ಕದ್ದು, ಬಳಿಕ ಸದ್ರಿ ಮೊಬೈಲ್‌ನಲ್ಲಿ, ಪೋನ್‌ ಪೇ ಮುಖಾಂತರ ಅವರ ಖಾತೆಯಲ್ಲಿದ್ದ ರೂ 64.000/- ಹಣದ ಪೈಕಿ, ರೂ 34.000/- ರೂ ಹಣವನ್ನು ಜಾಪರ್‌ ಎಂಬಾತನಿಗೂ, ರೂ 25.000/- ಹಣವನ್ನು ಮಹಮ್ಮದ್‌ ಎಂಬಾತನಿಗೂ ಹಾಗೂ ರೂ 2000/- ಹಣವನ್ನು ಸಿರಾಜ್‌ ಎಂಬಾತನಿಗೂ ವರ್ಗಾವಣೆ ಮಾಡಿದ್ದಾನೆ. ಆರೋಪಿಗಳು ಅಭಿದಾಬಾನು ರವರ ಗಂಡನ ಸ್ನೇಹಿತರಾಗಿರುವುದರಿಂದ ಮೊಬೈಲ್‌ ಮತ್ತು ಹಣವನ್ನು ವಾಪಸು ನೀಡಬಹುದೆಂದು ಕಾದಿದ್ದು, ಈವರೆಗೆ ವಾಪಾಸ್ ನೀಡದಿರುವ ಹಿನ್ನೆಲೆಯಲ್ಲಿ ನ.23ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಠಾಣೆಯಲ್ಲಿ ಅಕ್ರ ನಂ 116/2023 ಕಲಂ; 380,411ಭಾ ದಂ ಸಂ ಪ್ರಕರಣ ದಾಖಲಿಸಿದ್ದಾರೆ.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya
error: Content is protected !!