25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ಸೂರಜ್ ಶೆಟ್ಟಿ(23ವ), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30ವ), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿಕಿಶೋರ್. ಟಿ (32ವ) ಬಂಧಿತರು.

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ತಂಡ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಪ್ರತಾಪ್ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಅನೀಲ್ ಕುಮಾರ್.ಡಿ ಮತ್ತು ಸಬ್ ಇಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ ಹಾಗೂ ಸಿಬ್ಬಂದಿ ಎ.ಎಸ್.ಐ ಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಎಂಬವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!