23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

ಬೆಳ್ತಂಗಡಿ: ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಧಮ೯ಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಿನ್ನಿಗೋಳಿ ತಾಳಿಪ್ಪಡಿ ಗ್ರಾಮದ ಉಮಾ ಅಜಯ್ ಶೆಟ್ಟಿ (32ವ) ,ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ಸೂರಜ್ ಶೆಟ್ಟಿ(23ವ), ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ(30ವ), ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಪರೆಕಲ್ ನಿವಾಸಿಕಿಶೋರ್. ಟಿ (32ವ) ಬಂಧಿತರು.

ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಎಂಬಲ್ಲಿ ನವೆಂಬರ್ 9 ರಂದು ರಾತ್ರಿ 10 ಗಂಟೆ ಸಮಯಕ್ಕೆ ಇಸಾಕ್ ಎಂಬವರ ಅಕ್ಕನ ಮಗ ನೌಫಲ್ ಎಂಬವರು ತಮ್ಮ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ನೌಫಾಲ್ ನ ಗೆಳೆಯ ಸೈಪುದ್ದಿನ್ ಎಂಬಾತನ ಗೆಳೆಯರಾದ ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿಯವರು ಬಾಡಿಗೆಗೆ ನೀಡುವಂತೆ ಕೇಳಿದಾಗ ನೀಡದೇ ಇದ್ದುದ್ದರಿಂದ ಸದ್ರಿ ಕಾರನ್ನು ಸೂರಜ್ ಶೆಟ್ಟಿ ಮತ್ತು ಅಜಯ್ ಶೆಟ್ಟಿ ಯವರು ಕಳವು ಮಾಡಿ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ತಂಡ ನ.24 ರಂದು ಕಳ್ಳತನವಾದ ಇನೋವಾ ಕಾರು ಸಮೇತ ಪ್ರಕರಣದ ನಾಲ್ಕು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಇದೀಗ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್.ಸಿ.ಬಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಂ.ಎನ್ ರವರ ನಿರ್ದೇಶನದಂತೆ ಬಂಟ್ವಾಳ ಡಿ.ವೈಎಸ್.ಪಿ ಪ್ರತಾಪ್ ಸಿಂಗ್ ಥೋರಾಟ್ ರವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿಯವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಅನೀಲ್ ಕುಮಾರ್.ಡಿ ಮತ್ತು ಸಬ್ ಇಸ್ಪೆಕ್ಟರ್ ಸಮರ್ಥ ರವೀಂದ್ರ ಗಾಣಿಗೇರ ಹಾಗೂ ಸಿಬ್ಬಂದಿ ಎ.ಎಸ್.ಐ ಗಳಾದ ಸಾಮ್ಯುವೆಲ್ ಮತ್ತು ಪೌಲೋಸ್ ಹಾಗೂ ಸಿಬ್ಬಂದಿ ರಾಜೇಶ್.ಎನ್, ಪ್ರಶಾಂತ್, ಮಂಜುನಾಥ್, ಮಲ್ಲಿಕಾರ್ಜುನ್ ಎಂಬವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya
error: Content is protected !!