30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

ಕಲ್ಮಂಜ: ಕಲ್ಮಂಜ ಗ್ರಾಮದ ಪಜಿರಡ್ಕ- ಮದ್ಮಲ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಟೀಮ್ ದೇವರಗುಡ್ಡೆ ವತಿಯಿಂದ ನ.25 ರಂದು ಕುರ್ಚಿ ವಿತರಣೆ ಮಾಡಿದರು.
15-20 ಮಕ್ಕಳು ಇರುವ ಅಂಗನವಾಡಿ ಕೇಂದ್ರ ಇದಾಗಿದ್ದು,ಅನೇಕ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ ಮತ್ತು ಮಳೆಗಾಲದಲ್ಲಿ ನೀರು ಸೋರುವ ಸ್ಥಿತಿ ಈ ಅಂಗನವಾಡಿ ಕೇಂದ್ರದ್ದಾಗಿದೆ.ಹಾಗೆಯೇ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡದ ಬೇಡಿಕೆ ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದರು ಯಾವುದೇ ಸರಕಾರ ಈ ಕಡೆ ಗಮನ ಹರಿಸದಿರುವುದು ಬೇಸರದ ಸಂಗತಿ ಎಂಬುದು ಊರವರ ಅಭಿಪ್ರಾಯವಾಗಿದೆ.


ಹೆಚ್ಚಾಗಿ ಇಂಗ್ಲಿಷ್ ಶಿಕ್ಷಣಕ್ಕಾಗಿ ಮರುಹೋಗುತ್ತಿರುವ ಈ ಕಾಲಘಟ್ಟದಲ್ಲಿ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಬೆಳೆಸುವುದು ಸರಕಾರದ ಮತ್ತು ಊರವರ ಕರ್ತವ್ಯವಾಗಿದೆ.


ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ರೇಖಾ, ಆಶಾ ಕಾರ್ಯಕರ್ತೆ ವಿಜಯಾ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಶ್ರೀದೇವಿ, ಟೀಮ್ ದೇವರಗುಡ್ಡೆಯ ಹರೀಶ್ ಗೌಡ,ಸಚಿನ್ ಗೌಡ ಕಲ್ಮಂಜ, ಶಿವಪ್ರಸಾದ್, ಸಂಧ್ಯಾ, ಪುಷ್ಪವತಿ ಹಾಗೂ ಮಕ್ಕಳ ಪೋಷಕರು ಹಾಗೂ ಊರವರು ಪಾಲ್ಗೊಂಡಿದ್ದರು.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya
error: Content is protected !!