April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

ಕಲ್ಮಂಜ: ಕಲ್ಮಂಜ ಗ್ರಾಮದ ಪಜಿರಡ್ಕ- ಮದ್ಮಲ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಟೀಮ್ ದೇವರಗುಡ್ಡೆ ವತಿಯಿಂದ ನ.25 ರಂದು ಕುರ್ಚಿ ವಿತರಣೆ ಮಾಡಿದರು.
15-20 ಮಕ್ಕಳು ಇರುವ ಅಂಗನವಾಡಿ ಕೇಂದ್ರ ಇದಾಗಿದ್ದು,ಅನೇಕ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ ಮತ್ತು ಮಳೆಗಾಲದಲ್ಲಿ ನೀರು ಸೋರುವ ಸ್ಥಿತಿ ಈ ಅಂಗನವಾಡಿ ಕೇಂದ್ರದ್ದಾಗಿದೆ.ಹಾಗೆಯೇ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡದ ಬೇಡಿಕೆ ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದರು ಯಾವುದೇ ಸರಕಾರ ಈ ಕಡೆ ಗಮನ ಹರಿಸದಿರುವುದು ಬೇಸರದ ಸಂಗತಿ ಎಂಬುದು ಊರವರ ಅಭಿಪ್ರಾಯವಾಗಿದೆ.


ಹೆಚ್ಚಾಗಿ ಇಂಗ್ಲಿಷ್ ಶಿಕ್ಷಣಕ್ಕಾಗಿ ಮರುಹೋಗುತ್ತಿರುವ ಈ ಕಾಲಘಟ್ಟದಲ್ಲಿ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಬೆಳೆಸುವುದು ಸರಕಾರದ ಮತ್ತು ಊರವರ ಕರ್ತವ್ಯವಾಗಿದೆ.


ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ರೇಖಾ, ಆಶಾ ಕಾರ್ಯಕರ್ತೆ ವಿಜಯಾ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಶ್ರೀದೇವಿ, ಟೀಮ್ ದೇವರಗುಡ್ಡೆಯ ಹರೀಶ್ ಗೌಡ,ಸಚಿನ್ ಗೌಡ ಕಲ್ಮಂಜ, ಶಿವಪ್ರಸಾದ್, ಸಂಧ್ಯಾ, ಪುಷ್ಪವತಿ ಹಾಗೂ ಮಕ್ಕಳ ಪೋಷಕರು ಹಾಗೂ ಊರವರು ಪಾಲ್ಗೊಂಡಿದ್ದರು.

Related posts

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya
error: Content is protected !!