July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

ಕಲ್ಮಂಜ: ಕಲ್ಮಂಜ ಗ್ರಾಮದ ಪಜಿರಡ್ಕ- ಮದ್ಮಲ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಟೀಮ್ ದೇವರಗುಡ್ಡೆ ವತಿಯಿಂದ ನ.25 ರಂದು ಕುರ್ಚಿ ವಿತರಣೆ ಮಾಡಿದರು.
15-20 ಮಕ್ಕಳು ಇರುವ ಅಂಗನವಾಡಿ ಕೇಂದ್ರ ಇದಾಗಿದ್ದು,ಅನೇಕ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ ಮತ್ತು ಮಳೆಗಾಲದಲ್ಲಿ ನೀರು ಸೋರುವ ಸ್ಥಿತಿ ಈ ಅಂಗನವಾಡಿ ಕೇಂದ್ರದ್ದಾಗಿದೆ.ಹಾಗೆಯೇ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡದ ಬೇಡಿಕೆ ಅನೇಕ ವರ್ಷಗಳಿಂದ ಕೇಳಿಬರುತ್ತಿದ್ದರು ಯಾವುದೇ ಸರಕಾರ ಈ ಕಡೆ ಗಮನ ಹರಿಸದಿರುವುದು ಬೇಸರದ ಸಂಗತಿ ಎಂಬುದು ಊರವರ ಅಭಿಪ್ರಾಯವಾಗಿದೆ.


ಹೆಚ್ಚಾಗಿ ಇಂಗ್ಲಿಷ್ ಶಿಕ್ಷಣಕ್ಕಾಗಿ ಮರುಹೋಗುತ್ತಿರುವ ಈ ಕಾಲಘಟ್ಟದಲ್ಲಿ ಅಂಗನವಾಡಿ ಕೇಂದ್ರಗಳನ್ನು ಉಳಿಸಿ ಬೆಳೆಸುವುದು ಸರಕಾರದ ಮತ್ತು ಊರವರ ಕರ್ತವ್ಯವಾಗಿದೆ.


ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷರಾದ ರೇಖಾ, ಆಶಾ ಕಾರ್ಯಕರ್ತೆ ವಿಜಯಾ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಸಹಾಯಕಿ ಶ್ರೀದೇವಿ, ಟೀಮ್ ದೇವರಗುಡ್ಡೆಯ ಹರೀಶ್ ಗೌಡ,ಸಚಿನ್ ಗೌಡ ಕಲ್ಮಂಜ, ಶಿವಪ್ರಸಾದ್, ಸಂಧ್ಯಾ, ಪುಷ್ಪವತಿ ಹಾಗೂ ಮಕ್ಕಳ ಪೋಷಕರು ಹಾಗೂ ಊರವರು ಪಾಲ್ಗೊಂಡಿದ್ದರು.

Related posts

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya
error: Content is protected !!