September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

ಪೆರ್ಲ -ಬೈಪಾಡಿ : ಬಂದಾರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಜಂಟಿ ಆಶ್ರಯದಲ್ಲಿ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯು ಆರಂಭಗೊಳ್ಳಲಿರುವ ಕಟ್ಟಡದ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ ಮತ್ತು ತಿದ್ದುಪಡಿ ಮತ್ತು ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮವನ್ನು ನ.25 ರಂದು ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಇವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೋಹನ್ ಶೆಟ್ಟಿ ಸಹಾಯಕ ಅಂಚೆ ಅಧೀಕ್ಷಕರು ಕಾರ್ಕಳ, ಧನಂಜಯ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ ಉಪ ವಿಭಾಗ, ಶ್ರೀಮತಿ ವಿಮಲಾ ಅಂಚೆ ಮೇಲ್ವಿಚಾರಕರು ಬೆಳ್ತಂಗಡಿ, ಶ್ರೀಮತಿ ಭಾರತಿ ಕೋಡಿಯಲ್ ಗ್ರಾಮ ಪಂಚಾಯತ್ ಸದಸ್ಯರು ಬಂದಾರು, ಗೋಪಾಲಕೃಷ್ಣ ಶರ್ಮ ಕೊಯ್ಯುರು, ಮಹಾಬಲ ಗೌಡ ನಾಗಂದೋಡಿ, ರಾಮಣ್ಣಗೌಡ ಬೈಪಾಡಿ, ಉಮೇಶ್ ಗೌಡ ಅಧ್ಯಕ್ಷರು ಹಾಲು ಉತ್ಪಾದಕಾರ ಸಂಘ ಪೆರ್ಲ -ಬೈಪಾಡಿ, ನಿರ್ದೇಶಕರಾದ ಬಾಲಕೃಷ್ಣ ಗೌಡ ಪಾಪುದಡ್ಕ, ಲಕ್ಷ್ಮಿಕಾಂತಗೌಡ ಕೀಲಾರು, ದಿನೇಶ್ ಗೌಡ ಅಡ್ಡಾರು ಮತ್ತು ಊರವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!