22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಮೇಳದ ‘ಪ್ರಚಂಡ ಮಹಿಷಾಸುರ’ ಕನ್ನಡ ಪೌರಾಣಿಕ ನೂತನ ಪ್ರಸಂಗವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ ಬಿಡುಗಡೆಗೊಳಿಸಿದರು.

ಕೋಶಾಧಿಕಾರಿ ಪದ್ಮರಾಜ್ ಆರ್., ಮಾತನಾಡಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ವೈಭವದ ದಸರಾ ನಡೆಯುವ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಚಂಡ ಮಹಿಷಾಸುರ ಪ್ರಸಂಗ ಉದ್ಘಾಟನೆಗೊಂಡು ಪ್ರಪ್ರಥಮ ಪ್ರದರ್ಶನ ಕಾಣಬೇಕು ಎಂಬ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಮೇಳದ ಯಕ್ಷಗಾನ ಮಂಡಳಿಯ ಇಚ್ಛೆಗೆ ಅನುಗುಣವಾಗಿ ಶ್ರೀಕ್ಷೇತ್ರದಲ್ಲಿ ಪ್ರಪ್ರಥಮ ಪ್ರದರ್ಶನ ಗೊಳ್ಳುತ್ತಿರುವುದು ಸಂತಸದ ವಿಷಯ ಎಂದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ ಮಾತನಾಡಿ, ಗೆಜ್ಜೆಗಿರಿ ಮೇಳ ಪ್ರಾರಂಭಗೊಂಡ ಪ್ರಥಮ ವರ್ಷದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರದರ್ಶನಗೊಂಡು ಜನಮೆಚ್ಚುಗೆ ಪಡೆದಿದೆ ಎಂದರು.


ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ಗೆಜ್ಜೆಗಿರಿ ಮೇಳದ ಸಂಚಾಲಕ ನವೀನ್ ಸುವರ್ಣ ಸಜಿಪ, ಪ್ರಸಂಗ ಕರ್ತ ನಿತಿನ್ ತೆಂಕಕಾರಂದೂರು, ಕಲಾವಿದರಾದ ದಿನೇಶ್ ರೈ ಕಡಬ, ನೈನಾಡು ಸತೀಶ್ ಪೂಜಾರಿ, ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಂಚಾಲಕ ಹರೀಶ್ ಕೆ ಪೂಜಾರಿ, ಉರ್ವ ಬಿಲ್ಲವ ಸಂಘದ ಅಧ್ಯಕ್ಷ ಹರಿಪ್ರಸಾದ್, ಪ್ರಮುಖರಾದ ಸುರೇಶ್ ಕುಳಾಯಿ, ರಕ್ಷಿತ್ ಕೆ.ಬಿರ್ವ ಮುಂತಾದವರು ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಕಾರ್ಯಕ್ರಮ ನಿರೂಪಿಸಿದರು.

Related posts

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!