22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

ಗುರುವಾಯನಕೆರೆ: ದೇಶದ – ನಾಡಿನ ಸುಭದ್ರ ಭವಿಷ್ಯಕ್ಕಾಗಿ ದೂರದೃಷ್ಟಿ ಇರುವ ನಾಯಕರನ್ನು ಆರಿಸಿಕೊಳ್ಳಬೇಕು. ಇಂಥ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಚುನಾವಣೆಗೆ ವಿಶೇಷ ಮಹತ್ವವಿದೆ. ನಿಜವಾಗಿ ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದೆ ಎಂದು ದ.ಕ ಜಿಲ್ಲಾ ಪ.ಪೂ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ ಹೇಳಿದರು.


ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಚುನಾವಣಾ ಅರಿವು ಸ್ಪರ್ಧೆಗಳನ್ನು ಉದ್ಘಾಟಿಸಿ , ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್ ಸಾಲಿಯಾನ್ ಮಾತನಾಡಿ ‘ ಇಂದಿನ ವಿದ್ಯಾರ್ಥಿಗಳೇ ನಾಳಿನ ಪ್ರಜೆಗಳು ; ಮತದಾರರು. ಯಾವ ಪೂರ್ವಾಗ್ರಹ ಕ್ಕೂ ಒಳಗಾಗದೆ ಸೂಕ್ತ ನಾಯಕರನ್ನು ಆರಿಸುವ ಮೂಲಕ ಸುಭದ್ರ ದೇಶವನ್ನು ಕಟ್ಟುವ ಜವಾಬ್ದಾರಿ ಇಂದಿನ ಯುವ ಸಮೂಹದ ಮೇಲಿದೆ ‘ ಎಂದು ಹೇಳಿದರು.
ಜಿಲ್ಲಾ ಇ ಎಲ್ ಸಿ ಸಂಯೋಜಕರಾದ ಚಂದ್ರನಾಥ್ ಮಾತನಾಡಿ ‘ ದೇಶದ ಭವಿಷ್ಯ ಬದಲಿಸುವ ಶಕ್ತಿ ಯುವ ಜನತೆಗಿದೆ. ಚುನಾವಣೆಯಲ್ಲಿ ತಪ್ಪದೆ ಪಾಲ್ಗೊಳ್ಳುವ ಮೂಲಕ ಸಶಕ್ತ ಸರಕಾರವನ್ನು ತರುವ ಅವಕಾಶ ಪ್ರಜಾ ಪ್ರಭುತ್ವ ದಲ್ಲಿದೆ ಎಂದರು.
ಅಧ್ಯಕ್ಷತೆ ವಹಿಸಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಶುಭ ಹಾರೈಸಿದರು. ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಕಾರ್ಯದರ್ಶಿ ಅಭಿರಾಮ್ ಬಿ.ಎಸ್ , ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಪುರುಷೋತ್ತಮ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್ ಸಹಕರಿಸಿದರು. ಆಂಗ್ಲ ವಿಭಾಗ ಮುಖ್ಯಸ್ಥರಾದ ವಿಕಾಸ್ ಹೆಬ್ಬಾರ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ರಂಜಿತ್ ನಿರೂಪಿಸಿದರು. ಗಣಿತ ಉಪನ್ಯಾಸಕ ದರ್ಶನ್ ವಂದಿಸಿದರು.

Related posts

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!