ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

Suddi Udaya

ಉಜಿರೆ: “ಪೂಜ್ಯರು ನಡೆದು ಬಂದ ದಾರಿ ನಮಗೆ ಆದರ್ಶವಾಗಿವೆ. ನಮ್ಮ ಜೀವನಕ್ಕೆ ಅವರ ಆದರ್ಶಗಳು ದಾರಿದೀಪವಾಗಲಿ” ಎಂದು ಎಸ್. ಡಿ. ಎಮ್ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಬಿ ಶೆಟ್ಟಿ ಹೇಳಿದರು.

ಇವರು ನ.25 ರಂದು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳು ಪೂಜ್ಯರಿಗೆ ಜನ್ಮ ದಿನದ ಶುಭಾಶಯ ಪತ್ರಗಳು, ಸ್ವ ರಚಿತ ಗಾಯನ, ಚಿತ್ರಗಳ ಉಡುಗೊರೆಯನ್ನು ಮಾಡಿದರು. ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. 

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಕೆ ಜಿ ಉಪಸ್ಥಿತರಿದ್ದರು. ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Comment

error: Content is protected !!