22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

ಉಜಿರೆ: “ಪೂಜ್ಯರು ನಡೆದು ಬಂದ ದಾರಿ ನಮಗೆ ಆದರ್ಶವಾಗಿವೆ. ನಮ್ಮ ಜೀವನಕ್ಕೆ ಅವರ ಆದರ್ಶಗಳು ದಾರಿದೀಪವಾಗಲಿ” ಎಂದು ಎಸ್. ಡಿ. ಎಮ್ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸೋಮಶೇಖರ್ ಬಿ ಶೆಟ್ಟಿ ಹೇಳಿದರು.

ಇವರು ನ.25 ರಂದು ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಶಾಲಾ ವಿದ್ಯಾರ್ಥಿಗಳು ಪೂಜ್ಯರಿಗೆ ಜನ್ಮ ದಿನದ ಶುಭಾಶಯ ಪತ್ರಗಳು, ಸ್ವ ರಚಿತ ಗಾಯನ, ಚಿತ್ರಗಳ ಉಡುಗೊರೆಯನ್ನು ಮಾಡಿದರು. ಶಾಲಾ ವತಿಯಿಂದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. 

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಕೆ ಜಿ ಉಪಸ್ಥಿತರಿದ್ದರು. ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!