25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಜನ್ಮದಿನಾಚರಣೆ ಸಮಾರಂಭವನ್ನು ಎಸ್.ಡಿ.ಎಂ. ಡಿ.ಎಲ್.ಇಡಿ. ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ (ರಿ) ಉಜಿರೆಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಬಿ. ಸೋಮಶೇಖರ ಶೆಟ್ಟಿಯವರು ಆಗಮಿಸಿ ಹೆಗ್ಗಡೆಯವರು ನಾಡಿನ ಬೆಳಕು ಎಂದು ತಿಳಿಸಿದರು. ಕಡಿಮೆ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಎಲ್.ಕೆ.ಜಿ. ಯಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾದಾನ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅವರ್ಣನೀಯ. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದವರು ಹೆಗ್ಗಡೆಯವರು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಸ್ವಾಮಿ ಕೆ ಎ ಯವರು ವಹಿಸಿ ಹೆಗ್ಗಡೆಯವರು ದೂರದೃಷ್ಠಿಯುಳ್ಳವರು, ಆಧ್ಯಾತ್ಮ ಚಿಂತಕರು, ಅಭಿವೃದ್ಧಿಯ ಹರಿಕಾರ. ಆವರ ಮಾರ್ಗದರ್ಶನದಡಿಯಲ್ಲಿ ನಾವೆಲ್ಲ ಕೆಲಸ ನಿರ್ವಹಿಸುತ್ತಿರುವುದು ನಮಗೆ ಹೆಮ್ಮೆ ಎಂದು ಹೇಳಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಡಿ.ಇಲ್.ಇಡಿ.ಯ ಪ್ರಶಿಕ್ಷಣಾರ್ಥಿ ಯತೀಕ್ಷಾ ಪ್ರಥಮ ಬಹುಮಾನವನ್ನು ಹಾಗೂ ಪ್ರಥಮ ಡಿ.ಇಲ್.ಇಡಿ.ಯ ಪ್ರಶಿಕ್ಷಣಾರ್ಥಿ ಅಂಬಿಕಾ ದ್ವಿತೀಯ ಬಹುಮಾನವನ್ನು ಪಡೆದುಕೊಂಡರು.
ಹಾಗೆಯೇ ಶಿಕ್ಷಣ ಕ್ಷೇತ್ರದಲ್ಲಿ ಪೂಜ್ಯ ಖಾವಂದರರ ಕೊಡುಗೆಗಳು ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಡಿ.ಇಲ್.ಇಡಿ.ಯ ಪ್ರಶಿಕ್ಷಣಾರ್ಥಿಗಳಾದ ಅನುಷಾ ಪ್ರಥಮ ಬಹುಮಾನವನ್ನು ಮತ್ತು ಮುಜೈನಾ ದ್ವಿತೀಯ ಬಹುಮಾನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಉಪನ್ಯಾಸಕವೃಂದ ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಜಲಜಾಕ್ಷಿ ಸ್ವಾಗತಿಸಿ, ಆರತಿ ವಂದಿಸಿ, ಅಶ್ವಿನಿ ಪಿ ಹೆಚ್ ನಿರೂಪಿಸಿದರು.

Related posts

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya
error: Content is protected !!