27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

ಉಜಿರೆ: “ನಮ್ಮನ್ನು ಬೆಳೆಸಿ ಎತ್ತರಕ್ಕೆ ಏರಿಸಿದ ಗುರು ಹಿರಿಯರನ್ನು ಗೌರವಿಸಿ ಹಾಗೂ ಮರೆಯಾಗುತ್ತಿರುವ ನಮ್ಮ ಸಂಸ್ಕೃತಿ ಸಂಪ್ರದಾಯ ಪೂಜಾ ವಿಧಿಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಉತ್ತಮ ಕಾರ್ಯ” ಎಂದು ಜಿಲ್ಲಾ ಪ್ರಶಸ್ತಿ ವಿಜೇತ ಎಸ್.ಡಿ.ಎಮ್ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.

ಇವರು ನ.25 ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ದೀಪಾವಳಿಯ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಸಲುವಾಗಿ ಆಯೋಜಿಸಿದ್ದ 'ಜ್ಞಾನ ಜ್ಯೋತಿ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 ಶಾಲಾ ವಿದ್ಯಾರ್ಥಿಗಳಿಂದ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಗೋ ಪೂಜೆ, ಬಲಿಪಾಡ್ಯಮಿ, ತುಳಸಿ ಪೂಜೆಗಳ ಪ್ರಾತ್ಯಕ್ಷಿಕೆಯನ್ನು ಅತಿಥಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳು ಸಮೂಹ ಗಾಯನ ಮತ್ತು ಸಮೂಹ ನೃತ್ಯವನ್ನು ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. 

 ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಅದ್ವೈತ್ ಸ್ವಾಗತಿಸಿ, ಪೃಥ್ವಿ ವಂದಿಸಿದ ಕಾರ್ಯಕ್ರಮವನ್ನು ಪಹಲ್ ಜೈನ್ ನಿರೂಪಿಸಿದರು.

Related posts

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya
error: Content is protected !!