25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

ಉಜಿರೆ: “ನಮ್ಮನ್ನು ಬೆಳೆಸಿ ಎತ್ತರಕ್ಕೆ ಏರಿಸಿದ ಗುರು ಹಿರಿಯರನ್ನು ಗೌರವಿಸಿ ಹಾಗೂ ಮರೆಯಾಗುತ್ತಿರುವ ನಮ್ಮ ಸಂಸ್ಕೃತಿ ಸಂಪ್ರದಾಯ ಪೂಜಾ ವಿಧಿಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಉತ್ತಮ ಕಾರ್ಯ” ಎಂದು ಜಿಲ್ಲಾ ಪ್ರಶಸ್ತಿ ವಿಜೇತ ಎಸ್.ಡಿ.ಎಮ್ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.

ಇವರು ನ.25 ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ದೀಪಾವಳಿಯ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಸಲುವಾಗಿ ಆಯೋಜಿಸಿದ್ದ 'ಜ್ಞಾನ ಜ್ಯೋತಿ' ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 ಶಾಲಾ ವಿದ್ಯಾರ್ಥಿಗಳಿಂದ ಲಕ್ಷ್ಮೀ ಪೂಜೆ, ನರಕ ಚತುರ್ದಶಿ, ಗೋ ಪೂಜೆ, ಬಲಿಪಾಡ್ಯಮಿ, ತುಳಸಿ ಪೂಜೆಗಳ ಪ್ರಾತ್ಯಕ್ಷಿಕೆಯನ್ನು ಅತಿಥಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು. ವಿದ್ಯಾರ್ಥಿಗಳು ಸಮೂಹ ಗಾಯನ ಮತ್ತು ಸಮೂಹ ನೃತ್ಯವನ್ನು ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು. 

 ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಅದ್ವೈತ್ ಸ್ವಾಗತಿಸಿ, ಪೃಥ್ವಿ ವಂದಿಸಿದ ಕಾರ್ಯಕ್ರಮವನ್ನು ಪಹಲ್ ಜೈನ್ ನಿರೂಪಿಸಿದರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya
error: Content is protected !!