25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 46ನೇ ವರ್ಷದ ಭಜನಾ ಸಪ್ತಾಹವು ನ.27 ರಂದು ಭಜನೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಧಾರ್ಮಿಕ ಉಪನ್ಯಾಸಕರಾಗಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಜೆ ಇವರು ಮಾತನಾಡಿ ಮನೆ ಮನೆಯಲ್ಲಿ ನಿರಂತರವಾಗಿ ಭಜನೆ ನಡೆದರೆ, ಆ ಮನೆ ವಿಭಜನೆಯಾಗದು. ಮನೆಯಲ್ಲಿ ಶುಭಕಾರ್ಯಗಳು ನಡೆದಾಗ ಭಜನೆಯನ್ನು ಮಾಡಿದರೆ ಶುಭ ಕಾರ್ಯಕ್ಕೆ ದೇವರ ಅನುಗ್ರಹ ಇರುವುದು ಎಂದರು.

ವೇದಿಕೆಯಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಶರರಾದ ಡಾ| ಹರ್ಷ ಸಂಪಿಗೆತ್ತಾಯ, ಭಜನಾ ಮಂಡಳಿಯ ಅಧ್ಯಕ್ಷರಾದ ಪುಷ್ಪಕ್ ರಾವ್ ಇವರು ಉಪಸ್ಥಿತರಿದ್ದರು.

ಮಂಡಳಿಯ ವಾರ್ಷಿಕ ವರದಿಯನ್ನು ಕಾರ್ಯದರ್ಶಿಗಳಾದ ಯುವರಾಜ್ ಬರಮೇಲು ಮಂಡಿಸಿದರು. ಬಾಲಕೃಷ್ಣ ಬಿ ಸ್ವಾಗತಿಸಿ, ಯತೀಶ್ ರೈ ಅವರು ವಂದಿಸಿದರು. ಹರ್ಷ ಬಳ್ಳಮಂಜ ಕಾರ್ಯಕ್ರಮ ನಿರೂಪಿಸಿದರು. ನಂತರ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಿತು.

ದೇವರಿಗೆ ಭಜನೆ ಸೇವೆ ರಂಗಪೂಜೆ, ದೀಪೋತ್ಸವ ದೊಂದಿಗೆ ಭಜನಾ ಮಂಗಳೋತ್ಸವ ನಡೆಯಿತು.

Related posts

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya
error: Content is protected !!