23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನಪರಿಷತ್‌ ಸದಸ್ಯ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು, ಪಕ್ಷ ಸಂಘಟನೆಗಾಗಿ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳಲು ಬೆಳ್ತಂಗಡಿ ನಗರ ಬ್ಲಾಕ್‌ಗೆ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ಎಚ್.ಮಹಮ್ಮದ್ ಅಲಿಯವರು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪುತ್ತೂರು ಪುರಸಭೆ ಮತ್ತು ನಗರಸಭೆಯ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya
error: Content is protected !!