38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ(ರಿ.) ಉಜಿರೆ ಇದರ ಆಡಳಿತಕ್ಕೊಳಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗಾಗಿ, ಆಡಳಿತ ಮಂಡಳಿಯ ವತಿಯಿಂದ ಸಂಯೋಜಿಸಲ್ಪಟ್ಟ ಶೈಕ್ಷಣಿಕ ಸಮಾಲೋಚನಾ ಸಭೆಯು ಇತ್ತೀಚೆಗೆ ಉಜಿರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.

ಶ್ರೀ ಧ ಮಂ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿಯವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಾಲಾ ಫಲಿತಾಂಶದ ಜೊತೆಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಯೋಚಿಸಿ ಕಾರ್ಯಪ್ರವೃತ್ತರಾಗಲು ವಿಷಯಾವಾರು ಶಿಕ್ಷಕರ ಸಮಾಲೋಚನಾ ಸಭೆಯ ಅಗತ್ಯವಿದೆ. ಈ ಮೂಲಕ ವಿಷಯಾವಾರು ಶಿಕ್ಷಕರ ವೇದಿಕೆಯನ್ನು ರಚಿಸಿಕೊಂಡು ಪರಸ್ಪರ ಹಂಚಿಕೊಳ್ಳುವಿಕೆಯ ಮೂಲಕ ಬೋಧನೆಯಲ್ಲಿ ಹೊಸತನ ಅಳವಡಿಸಿಕೊಂಡು, ಶಿಕ್ಷಕರಲ್ಲಿ ಸಮಕಾಲೀನ ಶೈಕ್ಷಣಿಕ ಸವಾಲುಗಳ ನಿರ್ವಹಣೆಯ ಸಾಮರ್ಥ್ಯ ವೃದ್ಧಿ ಇದರಿಂದ ಸಾಧ್ಯ. ಆಡಳಿತ ಮಂಡಳಿಯ ಆಶಯವನ್ನು ಈಡೇರಿಸುವಂತೆ ವಿಷಯ ವೇದಿಕೆಯು ಕಾರ್ಯ ನಿರ್ವಹಿಸಲಿ ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಉಜಿರೆ ಕೇಂದ್ರೀಯ ಪಠ್ಯಕ್ರಮದ ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್, ಸಮಾಲೋಚನಾ ಸಭೆಯ ಸಂಯೋಜಕರಾದ ಬೆಳಾಲು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸಭೆಯ ಆಶಯದ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಶ್ರೀ ಧ ಮ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಶ್ರೀಮತಿ ವಿದ್ಯಾಲಕ್ಷ್ಮಿ ಉಜಿರೆ, ಶ್ರೀಮತಿ ಹೇಮಲತಾ ಬೆಳ್ತಂಗಡಿ, ಪದ್ಮರಾಜ ಧರ್ಮಸ್ಥಳ, ಮುಕುಂದ ಚಂದ್ರ ಪೆರಿಂಜೆಯವರು ಉಪಸ್ಥಿತರಿದ್ದರು.

ಈಗಾಗಲೆ ವಿವಿಧ ವಿಷಯಗಳ ವೇದಿಕೆಯನ್ನು ರಚಿಸಲಾಗಿದ್ದು ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗಿನ ಬೋಧಕ ಸಿಬ್ಬಂದಿಯವರನ್ನು ಒಳಗೊಳ್ಳಿಸಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.

Related posts

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅನ್ನದಾನ ಸೇವೆಯ ಕರಪತ್ರ ಬಿಡುಗಡೆ

Suddi Udaya
error: Content is protected !!