38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ


ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ.

ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32ವ), ನೆರಿಯ ಗ್ರಾಮದ ಸೆಬಾಸ್ಟಿಯನ್ (31ವ) ಹಾಗೂ ಕೇರಳ ಇಡುಕಿ ಜಿಲ್ಲೆ ವನ್ನಪುರಂ ಗ್ರಾಮ ತೋಡುಪುಯನಿವಾಸಿ ಅನಿಲ್ ತೋಮಸ್ (31ವ) ಎಂಬವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ನ. 27ರಂದು ರಾತ್ರಿ ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ ೭೫ರಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗಾಗಿ ವೆನ್ಯೂ ವಾಹನ ನಂಬ್ರ ಏಂ-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದಾಗ ಈ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು.

ಕಾರಿನಲ್ಲಿದ್ದ ರೂ.45 ಸಾವಿರ ಮೌಲ್ಯದ ಮಾದಕ ವಸ್ತು ಎಂಡಿಎಂಎ ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ೧೬೨/೨೦೨೩ ಕಲಂ: U/s-೮(ಛಿ) ೨೨(b) ಎನ್.ಡಿ.ಪಿ.ಎಸ್ ಕಾಯ್ದೆ ಡಿ/ತಿ ೩೪ iಠಿಛಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!