July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ


ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ.

ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32ವ), ನೆರಿಯ ಗ್ರಾಮದ ಸೆಬಾಸ್ಟಿಯನ್ (31ವ) ಹಾಗೂ ಕೇರಳ ಇಡುಕಿ ಜಿಲ್ಲೆ ವನ್ನಪುರಂ ಗ್ರಾಮ ತೋಡುಪುಯನಿವಾಸಿ ಅನಿಲ್ ತೋಮಸ್ (31ವ) ಎಂಬವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ನ. 27ರಂದು ರಾತ್ರಿ ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ ೭೫ರಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗಾಗಿ ವೆನ್ಯೂ ವಾಹನ ನಂಬ್ರ ಏಂ-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದಾಗ ಈ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು.

ಕಾರಿನಲ್ಲಿದ್ದ ರೂ.45 ಸಾವಿರ ಮೌಲ್ಯದ ಮಾದಕ ವಸ್ತು ಎಂಡಿಎಂಎ ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ೧೬೨/೨೦೨೩ ಕಲಂ: U/s-೮(ಛಿ) ೨೨(b) ಎನ್.ಡಿ.ಪಿ.ಎಸ್ ಕಾಯ್ದೆ ಡಿ/ತಿ ೩೪ iಠಿಛಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!