23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ


ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ.

ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32ವ), ನೆರಿಯ ಗ್ರಾಮದ ಸೆಬಾಸ್ಟಿಯನ್ (31ವ) ಹಾಗೂ ಕೇರಳ ಇಡುಕಿ ಜಿಲ್ಲೆ ವನ್ನಪುರಂ ಗ್ರಾಮ ತೋಡುಪುಯನಿವಾಸಿ ಅನಿಲ್ ತೋಮಸ್ (31ವ) ಎಂಬವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ನ. 27ರಂದು ರಾತ್ರಿ ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ ೭೫ರಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗಾಗಿ ವೆನ್ಯೂ ವಾಹನ ನಂಬ್ರ ಏಂ-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದಾಗ ಈ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು.

ಕಾರಿನಲ್ಲಿದ್ದ ರೂ.45 ಸಾವಿರ ಮೌಲ್ಯದ ಮಾದಕ ವಸ್ತು ಎಂಡಿಎಂಎ ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ೧೬೨/೨೦೨೩ ಕಲಂ: U/s-೮(ಛಿ) ೨೨(b) ಎನ್.ಡಿ.ಪಿ.ಎಸ್ ಕಾಯ್ದೆ ಡಿ/ತಿ ೩೪ iಠಿಛಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya
error: Content is protected !!