September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ


ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ.

ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32ವ), ನೆರಿಯ ಗ್ರಾಮದ ಸೆಬಾಸ್ಟಿಯನ್ (31ವ) ಹಾಗೂ ಕೇರಳ ಇಡುಕಿ ಜಿಲ್ಲೆ ವನ್ನಪುರಂ ಗ್ರಾಮ ತೋಡುಪುಯನಿವಾಸಿ ಅನಿಲ್ ತೋಮಸ್ (31ವ) ಎಂಬವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ನ. 27ರಂದು ರಾತ್ರಿ ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ ೭೫ರಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗಾಗಿ ವೆನ್ಯೂ ವಾಹನ ನಂಬ್ರ ಏಂ-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದಾಗ ಈ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು.

ಕಾರಿನಲ್ಲಿದ್ದ ರೂ.45 ಸಾವಿರ ಮೌಲ್ಯದ ಮಾದಕ ವಸ್ತು ಎಂಡಿಎಂಎ ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ೧೬೨/೨೦೨೩ ಕಲಂ: U/s-೮(ಛಿ) ೨೨(b) ಎನ್.ಡಿ.ಪಿ.ಎಸ್ ಕಾಯ್ದೆ ಡಿ/ತಿ ೩೪ iಠಿಛಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಬಾರ್ಯ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಸೀಯಾಳ ಅಭಿಷೇಕ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!