July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಾಹನ ಸಂಚಾರ ಹಾಗೂ ಸಾರ್ವಜನಿಕರು ತೆರಳಲು ಕಷ್ಷವಾಗಿದೆ. ಮರಬಿದ್ದು ಕೆಲವು ತಾಸು ಕಳೆದರೂ ಸಂಭಂಧ ಪಟ್ಟವರಿಂದ ಮರ ತೆರವುಗೊಳಿಸುವ ಕೆಲಸ ಆಗಲಿಲ್ಲ.

ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ತೆರವುಗೊಳಿಸಲು ಸಾರ್ವಜನಿಕರು ಹಲವು ಬಾರಿ ಗ್ರಾಮ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೂ ಅರಣ್ಯ ಇಲಾಖೆ,ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.ರಸ್ತೆ ಬದಿ ಅಪಾಯಕಾರಿ ಮರಗಳು ಬೆಳದಿದ್ದು ಇಲಾಖೆಯು ಮರ ತೆರವುಗೊಳಿಸುವ ಕೆಲಸ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಬಳಂಜ ಗ್ರಾಮ ಪಂಚಾಯತ್ ಕೂಡಲೇ ಈ ಭಾಗದ ಮರಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳದಿಂದ ರೂ.1 ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ: ವಾಹನ ಸಂಚಾರ ಇಂದು ಮಾರ್ಗ ಬದಲಾವಣೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya
error: Content is protected !!