22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ ಸ್ಕೌಟ್ ಗೈಡ್ ಗಳಿಂದ , ರಾಷ್ಟ್ರಪತಿ ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ ವಿ ಪ್ರಾಂಜಾಲ್ ಗೆ ನುಡಿ ನಮನ ಸಲ್ಲಿಸಲಾಯಿತು.
ಈ ನುಡಿ ನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಸಹಾಯಕ ಆಯುಕ್ತರಾದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ. ಸೋಮಶೇಖರ್ ಶೆಟ್ಟಿ ಭಾಗವಹಿಸಿ “ಸೈನಿಕರು ನಮ್ಮ ಹೆಮ್ಮೆ ” ಅಗಲಿದ ವೀರಯೋಧನ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶ್ರೀ ಮಂಜುನಾಥನಲ್ಲಿ ಪ್ರಾರ್ಥಿಸಿ ಅಗಲಿದ ವೀರ ಯೋಧನಿಗೆ ಪುಷ್ಪ ನಮನ ಸಲ್ಲಿಸಿದರು. ತದನಂತರ ವೀರ ಯೋಧನಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

 ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. 

‌‌ ಶ್ರದ್ಧಾಂಜಲಿ ಸಭೆಯ ನಿರೂಪಣೆಯನ್ನು ಪ್ರಾಪ್ತಿ ವಿ ಶೆಟ್ಟಿ ನೆರವೇರಿಸಿಕೊಟ್ಟರು. ಸ್ವಾಗತವನ್ನು ಸ್ಧಳೀಯ ಸಂಸ್ದೆಯ ಕಾರ್ಯದರ್ಶಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಯೋಜಕ ಶಿಕ್ಷಕ ಶ್ರೀಮತಿ ಪ್ರಮೀಳ ನಿರ್ವಹಿಸಿದರು. ಗೈಡ್ ಸಿಂಚನ ಧನ್ಯವಾದವಿತ್ತರು.

Related posts

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನ ; ಓರ್ವ ಆರೋಪಿ ಬಂಧನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya
error: Content is protected !!