23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಪುತ್ತೂರಿನ ಕುಟುಂಬವೊಂದು ನೆರಿಯದ ಸಂಬಂಧಿಕರ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆರಿಯ ಗ್ರಾಮದಲ್ಲಿ ನ.27 ರಂದು ರಾತ್ರಿ ನಡೆದಿದೆ.


ಪುತ್ತೂರು ತಾಲೂಕಿನ ಅಬ್ದುಲ್ ರಹಮಾನ್(40) ಹಾಗೂ ನೆರಿಯ ಗ್ರಾಮದ ಹಿಟ್ಟಾಡಿ ನಾಸಿಯಾ(30) ಗಾಯಗೊಂಡಿದ್ದು, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರಿನ ಕುಟುಂಬ ನೆರಿಯದ ಸಂಬಂಧಿಕರ ಮನೆಗೆ ಹೋಗುವಾಗ ಒಂಟಿ ಸಲಗ ಕಂಡಿದ್ದು ತಕ್ಷಣ ಕಾರನ್ನು ಬಯಲು ಬಳಿ ನಿಲ್ಲಿಸಿದ್ದು ಆನೆ ಕಾರಿನ ಮೇಲೆ ದಾಳಿ ಮಾಡಿ ಕಾರನ್ನು ಪಲ್ಟಿ ಮಾಡಿದೆ. ದಂತದಿಂದ ಕಾರಿನ ಡೋರ್ ಮತ್ತು ಚಾಲಕನ ಸೀಟ್‌ಗೆ ಹಾನಿ ಮಾಡಿದೆ. ಅಲ್ಲಿಂದ ತೆಳಿದೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಗೊಂಡ ಇಬ್ಬರನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಅರಣ್ಯಾ ಇಲಾಖೆ ತಂಡ ಗಾಯಗೊಂಡವರನ್ನು ಭೇಟಿ ಮಾಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆನೆ ಹೋದ ಸ್ಥಳಕ್ಕೆ ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ.


ಒಂಟಿ ಸಲಗ ನೆರಿಯ ಸುತ್ತಮುತ್ತ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮತ್ತಿ ಸಿಬ್ಬಂದಿ ರಾತ್ರಿ ಹೊತ್ತು ಸಂಚಾರಿಸುವ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಒಂಟಿ ಸಲಗದ ಬಗ್ಗೆ ನಿಗಾ ಇಡಲು ನೇಮಿಸಲಾಗಿದೆ ಎಂದು ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.

Related posts

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya
error: Content is protected !!