September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಪುತ್ತೂರಿನ ಕುಟುಂಬವೊಂದು ನೆರಿಯದ ಸಂಬಂಧಿಕರ ಮನೆಗೆ ಹೋಗುವಾಗ ಒಂಟಿ ಸಲಗ ಕಾರಿಗೆ ಮೇಲೆ ದಾಳಿ ಮಾಡಿದ್ದು ಇಬ್ಬರಿಗೆ ಗಾಯವಾಗಿದ್ದು , ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನೆರಿಯ ಗ್ರಾಮದಲ್ಲಿ ನ.27 ರಂದು ರಾತ್ರಿ ನಡೆದಿದೆ.


ಪುತ್ತೂರು ತಾಲೂಕಿನ ಅಬ್ದುಲ್ ರಹಮಾನ್(40) ಹಾಗೂ ನೆರಿಯ ಗ್ರಾಮದ ಹಿಟ್ಟಾಡಿ ನಾಸಿಯಾ(30) ಗಾಯಗೊಂಡಿದ್ದು, ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರಿನ ಕುಟುಂಬ ನೆರಿಯದ ಸಂಬಂಧಿಕರ ಮನೆಗೆ ಹೋಗುವಾಗ ಒಂಟಿ ಸಲಗ ಕಂಡಿದ್ದು ತಕ್ಷಣ ಕಾರನ್ನು ಬಯಲು ಬಳಿ ನಿಲ್ಲಿಸಿದ್ದು ಆನೆ ಕಾರಿನ ಮೇಲೆ ದಾಳಿ ಮಾಡಿ ಕಾರನ್ನು ಪಲ್ಟಿ ಮಾಡಿದೆ. ದಂತದಿಂದ ಕಾರಿನ ಡೋರ್ ಮತ್ತು ಚಾಲಕನ ಸೀಟ್‌ಗೆ ಹಾನಿ ಮಾಡಿದೆ. ಅಲ್ಲಿಂದ ತೆಳಿದೆ. ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಬಂದು ಗಾಯಗೊಂಡ ಇಬ್ಬರನ್ನು ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ಸೇರಿಸಿದ್ದಾರೆ. ಇಬ್ಬರು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿ ಅರಣ್ಯಾ ಇಲಾಖೆ ತಂಡ ಗಾಯಗೊಂಡವರನ್ನು ಭೇಟಿ ಮಾಡಿ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಆನೆ ಹೋದ ಸ್ಥಳಕ್ಕೆ ಹೋಗಿ ಮಾಹಿತಿ ಪಡೆದುಕೊಂಡಿದ್ದಾರೆ.


ಒಂಟಿ ಸಲಗ ನೆರಿಯ ಸುತ್ತಮುತ್ತ ತಿರುಗಾಟ ನಡೆಸುತ್ತಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಬೆಳ್ತಂಗಡಿ ಅರಣ್ಯಾಧಿಕಾರಿ ಮೋಹನ್ ಕುಮಾರ್ ಮತ್ತಿ ಸಿಬ್ಬಂದಿ ರಾತ್ರಿ ಹೊತ್ತು ಸಂಚಾರಿಸುವ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳನ್ನು ಒಂಟಿ ಸಲಗದ ಬಗ್ಗೆ ನಿಗಾ ಇಡಲು ನೇಮಿಸಲಾಗಿದೆ ಎಂದು ಅರಣ್ಯಾಧಿಕಾರಿ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.

Related posts

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!