38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು.

ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು. ಶಾಲಾ ಮಕ್ಕಳು ದೀಪ ಬೆಳಗಿಸಿ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಕಳೆಂಜ ಗ್ರಾ.ಪಂ. ಸದಸ್ಯರಾದ ಟಿ.ಎಸ್ ನಿತ್ಯಾನಂದ ರೈ, ಪ್ರೇಮಾ ಬಿ.ಎಸ್, ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಟಿ ಸಬಾಸ್ಟಿನ್ , ಶಾಲೆತ್ತಡ್ಕ ಶಾಲೆಯ ಹೆಚ್.ಎಮ್ ಶ್ರೀಮತಿ ರತ್ನಾ , ಸಿಹೆಚ್.ಒ ನಿಖಿತಾ, ಮಾಜಿ ಅಂಗನವಾಡಿ ಕಾರ್‍ಯಕರ್ತೆ ಪಿ.ಟಿ ಏಲಿಯಮ್ಮ , ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹರೀಶ್ ಒಳಗುಡ್ಡೆರವರು ಅಂಗನವಾಡಿಗೆ ಹೂವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.

ಮಕ್ಕಳ ಆಟೋಟ, ಸಾಂಸ್ಕೃತಿಕ ಚಟುವಟಿಕೆಯ ಬಹುಮಾನವನ್ನು ವಿತರಿಸಲಾಯಿತು.ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನೆರವೇರಿತು. ಅಂಗನವಾಡಿ ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಕಾರ್‍ಯಕ್ರಮ ನಿರೂಪಿಸಿದರು. ಸಹಾಯಕಿ ಅನ್ನಿಲ್ಲಾ ರೋಶ್ನಿ ವಂದಿಸಿದರು. ಮಕ್ಕಳ ಫೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya
error: Content is protected !!