April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು.

ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು. ಶಾಲಾ ಮಕ್ಕಳು ದೀಪ ಬೆಳಗಿಸಿ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಕಳೆಂಜ ಗ್ರಾ.ಪಂ. ಸದಸ್ಯರಾದ ಟಿ.ಎಸ್ ನಿತ್ಯಾನಂದ ರೈ, ಪ್ರೇಮಾ ಬಿ.ಎಸ್, ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಟಿ ಸಬಾಸ್ಟಿನ್ , ಶಾಲೆತ್ತಡ್ಕ ಶಾಲೆಯ ಹೆಚ್.ಎಮ್ ಶ್ರೀಮತಿ ರತ್ನಾ , ಸಿಹೆಚ್.ಒ ನಿಖಿತಾ, ಮಾಜಿ ಅಂಗನವಾಡಿ ಕಾರ್‍ಯಕರ್ತೆ ಪಿ.ಟಿ ಏಲಿಯಮ್ಮ , ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹರೀಶ್ ಒಳಗುಡ್ಡೆರವರು ಅಂಗನವಾಡಿಗೆ ಹೂವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.

ಮಕ್ಕಳ ಆಟೋಟ, ಸಾಂಸ್ಕೃತಿಕ ಚಟುವಟಿಕೆಯ ಬಹುಮಾನವನ್ನು ವಿತರಿಸಲಾಯಿತು.ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನೆರವೇರಿತು. ಅಂಗನವಾಡಿ ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಕಾರ್‍ಯಕ್ರಮ ನಿರೂಪಿಸಿದರು. ಸಹಾಯಕಿ ಅನ್ನಿಲ್ಲಾ ರೋಶ್ನಿ ವಂದಿಸಿದರು. ಮಕ್ಕಳ ಫೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya
error: Content is protected !!