25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು.

ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು. ಶಾಲಾ ಮಕ್ಕಳು ದೀಪ ಬೆಳಗಿಸಿ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಕಳೆಂಜ ಗ್ರಾ.ಪಂ. ಸದಸ್ಯರಾದ ಟಿ.ಎಸ್ ನಿತ್ಯಾನಂದ ರೈ, ಪ್ರೇಮಾ ಬಿ.ಎಸ್, ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಟಿ ಸಬಾಸ್ಟಿನ್ , ಶಾಲೆತ್ತಡ್ಕ ಶಾಲೆಯ ಹೆಚ್.ಎಮ್ ಶ್ರೀಮತಿ ರತ್ನಾ , ಸಿಹೆಚ್.ಒ ನಿಖಿತಾ, ಮಾಜಿ ಅಂಗನವಾಡಿ ಕಾರ್‍ಯಕರ್ತೆ ಪಿ.ಟಿ ಏಲಿಯಮ್ಮ , ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹರೀಶ್ ಒಳಗುಡ್ಡೆರವರು ಅಂಗನವಾಡಿಗೆ ಹೂವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.

ಮಕ್ಕಳ ಆಟೋಟ, ಸಾಂಸ್ಕೃತಿಕ ಚಟುವಟಿಕೆಯ ಬಹುಮಾನವನ್ನು ವಿತರಿಸಲಾಯಿತು.ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನೆರವೇರಿತು. ಅಂಗನವಾಡಿ ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಕಾರ್‍ಯಕ್ರಮ ನಿರೂಪಿಸಿದರು. ಸಹಾಯಕಿ ಅನ್ನಿಲ್ಲಾ ರೋಶ್ನಿ ವಂದಿಸಿದರು. ಮಕ್ಕಳ ಫೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಕಕ್ಕಿಂಜೆಯ ಶೇಖ್ ಅಝೀಮ್ ರಿಗೆ ಪ್ರಶಸ್ತಿ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾವೂರು: ಯಮುನ ಅಮ್ಮು ಮುಗೇರರ ಮನೆಗೆ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!