23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕಳೆಜ: ಇಲ್ಲಿಯ ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ನ.27 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಕಛೇರಿಯ ಮುಂಭಾಗದಲ್ಲಿ ನಡೆಸಲಾಯಿತು.

ಕಾರ್‍ಯಕ್ರಮ ಅಧ್ಯಕ್ಷರಾಗಿ ಅಂಗನವಾಡಿಯ ಪುಟಾಣಿ ವೈಷ್ಣವಿ ವಹಿಸಿದ್ದರು. ಶಾಲಾ ಮಕ್ಕಳು ದೀಪ ಬೆಳಗಿಸಿ ಕಾರ್‍ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಕಳೆಂಜ ಗ್ರಾ.ಪಂ. ಸದಸ್ಯರಾದ ಟಿ.ಎಸ್ ನಿತ್ಯಾನಂದ ರೈ, ಪ್ರೇಮಾ ಬಿ.ಎಸ್, ಗ್ರಾಮಾಭ್ಯುದಯ ಕಾರ್‍ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಟಿ ಸಬಾಸ್ಟಿನ್ , ಶಾಲೆತ್ತಡ್ಕ ಶಾಲೆಯ ಹೆಚ್.ಎಮ್ ಶ್ರೀಮತಿ ರತ್ನಾ , ಸಿಹೆಚ್.ಒ ನಿಖಿತಾ, ಮಾಜಿ ಅಂಗನವಾಡಿ ಕಾರ್‍ಯಕರ್ತೆ ಪಿ.ಟಿ ಏಲಿಯಮ್ಮ , ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಪ್ರತಿಮಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹರೀಶ್ ಒಳಗುಡ್ಡೆರವರು ಅಂಗನವಾಡಿಗೆ ಹೂವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.

ಮಕ್ಕಳ ಆಟೋಟ, ಸಾಂಸ್ಕೃತಿಕ ಚಟುವಟಿಕೆಯ ಬಹುಮಾನವನ್ನು ವಿತರಿಸಲಾಯಿತು.ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್‍ಯಕ್ರಮ ನೆರವೇರಿತು. ಅಂಗನವಾಡಿ ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಕಾರ್‍ಯಕ್ರಮ ನಿರೂಪಿಸಿದರು. ಸಹಾಯಕಿ ಅನ್ನಿಲ್ಲಾ ರೋಶ್ನಿ ವಂದಿಸಿದರು. ಮಕ್ಕಳ ಫೋಷಕರು ಹಾಗೂ ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!