25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಉಜಿರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ” ಡಿ.3 ರಂದು ಉಜಿರೆ ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲಾ ಬಳಿ ನಡೆಯಲಿದೆ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ನ.28ರಂದು ಗುರುನಾರಾಯಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.


ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ನಿವೃತ್ತ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟನವರ್, ತುಳುನಾಡ ದೈವರಾಧನೆ ವಿಮರ್ಷಕ ತಮಣ್ಣ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ ಚಂದಪ್ಪ ಗೌಡ, ಹೈ ಕೋರ್ಟ್ ವಕೀಲರು ಮೋಹಿತ್ ಕುಮಾರ್, ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಎಂ.ಎಲ್. ಪರಶುರಾಮು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಹಾಗೂ ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya
error: Content is protected !!