July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯ ಸೌರಭ ಮತ್ತು ಇಕೋ ಕ್ಲಬ್ ಆಯೋಜಿಸಿದ cooking without fire ಎಂಬ( interclass level ) ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

 ವಿದ್ಯಾರ್ಥಿಗಳಲ್ಲಿ ಬೆಂಕಿಯ ಬಳಕೆ ಇಲ್ಲದೆ ತುರ್ತು ಸಂದರ್ಭದಲ್ಲಿ ಕೆಲವೊಂದು ಹಸಿ ಪದಾರ್ಥಗಳಿಗೆ ಪೌಷ್ಠಿಕ ಮಿಶ್ರಣವನ್ನು ಬೆರೆಸಿ ವಿಶೇಷವಾದ ಆಹಾರ ವನ್ನು ತಯಾರಿಸುವುದು, ಮೂಲ ಆಹಾರ ವಾಸ್ತುವಿನಲ್ಲಿ ಇರುವ ನೈಜ ಪೋಷ್ಟಿಕ ಅಂಶಗಳು ಬೇಯಿಸಿದಾಗ ಇಲ್ಲವಾಗುವುದು,  ಬೇಯಿಸದೆ ಇರುವ ಆಹಾರವನ್ನು ಅಂದವಾಗಿ ಅಲಂಕರಿಸಿ ಆಯೋಜಿಸುವಂತಹ ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಈ ಚಟುವಟಿಕೆಯನ್ನು ಆಯೋಜಿಸಲಾಯಿತು.

 ಕಾರ್ಯ್ರಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೀರ್ಪುಗಾರರಾಗಿ ಗೃಹವಿಜ್ಞಾನ ವಿಭಾಗದ ಮುಖ್ಯಸ್ಥೆ ಶೋಭ ಎಸ್. ಹಾಗು ಸಸ್ಯಶಾಸ್ತ್ರ ವಿಭಾಗದ ಪ್ರಾದ್ಯಾಪಕಿಯಾದ ಶಕುಂತಲಾ ಬಿ. ಅವರು ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ, ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್, ಕು| ಸ್ವಾತಿ, ಕು| ಮಂಜುಶ್ರೀ ಉಪಸ್ಥಿತರಿದ್ದರು. 

Related posts

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
error: Content is protected !!