25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾ) ಉಜಿರೆಯ ಸಸ್ಯಶಾಸ್ತ್ರ ವಿಭಾಗದ ಸಕ್ರಿಯ ಸಂಘಗಳಾದ ಸಸ್ಯ ಸೌರಭ ಮತ್ತು ಇಕೋ ಕ್ಲಬ್ ಆಯೋಜಿಸಿದ cooking without fire ಎಂಬ( interclass level ) ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.

 ವಿದ್ಯಾರ್ಥಿಗಳಲ್ಲಿ ಬೆಂಕಿಯ ಬಳಕೆ ಇಲ್ಲದೆ ತುರ್ತು ಸಂದರ್ಭದಲ್ಲಿ ಕೆಲವೊಂದು ಹಸಿ ಪದಾರ್ಥಗಳಿಗೆ ಪೌಷ್ಠಿಕ ಮಿಶ್ರಣವನ್ನು ಬೆರೆಸಿ ವಿಶೇಷವಾದ ಆಹಾರ ವನ್ನು ತಯಾರಿಸುವುದು, ಮೂಲ ಆಹಾರ ವಾಸ್ತುವಿನಲ್ಲಿ ಇರುವ ನೈಜ ಪೋಷ್ಟಿಕ ಅಂಶಗಳು ಬೇಯಿಸಿದಾಗ ಇಲ್ಲವಾಗುವುದು,  ಬೇಯಿಸದೆ ಇರುವ ಆಹಾರವನ್ನು ಅಂದವಾಗಿ ಅಲಂಕರಿಸಿ ಆಯೋಜಿಸುವಂತಹ ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಈ ಚಟುವಟಿಕೆಯನ್ನು ಆಯೋಜಿಸಲಾಯಿತು.

 ಕಾರ್ಯ್ರಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತೀರ್ಪುಗಾರರಾಗಿ ಗೃಹವಿಜ್ಞಾನ ವಿಭಾಗದ ಮುಖ್ಯಸ್ಥೆ ಶೋಭ ಎಸ್. ಹಾಗು ಸಸ್ಯಶಾಸ್ತ್ರ ವಿಭಾಗದ ಪ್ರಾದ್ಯಾಪಕಿಯಾದ ಶಕುಂತಲಾ ಬಿ. ಅವರು ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ, ಸಹಾಯಕ ಪ್ರಾಧ್ಯಾಪಕರಾದ ಅಭಿಲಾಷ್ ಕೆ.ಎಸ್, ಕು| ಸ್ವಾತಿ, ಕು| ಮಂಜುಶ್ರೀ ಉಪಸ್ಥಿತರಿದ್ದರು. 

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!