23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇದರ ವಾರ್ಷಿಕೋತ್ಸವವು ಡಿ.9 ರಂದು ನಡೆಯಲಿದ್ದು ಈ ಪ್ರಯುಕ್ತ ನ.26 ರಂದು ಶಾಲಾ ಕ್ರೀಡೋತ್ಸವ ಜರಗಿತು.

ಘಟಕರಾಗಿ ಆಗಮಿಸಿದ ಸೌತಡ್ಕ ಸ್ಪೈಸಸ್ ಹೌಸ್ ಉದ್ಯಮಿ ಬಾಲಕೃಷ್ಣ ನೈಮಿಶ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭಕೋರಿದರು. ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಕಾವ್ಯ ಭಾಸ್ಕರ ಕೊಡಿಂಗೇರಿ ಇವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರಾದ ರಮೇಶ್ ಕುಡಾಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀನಾಥ್ ಬಡೆಕೈಲು, ಮಾತೆಯರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಬಡೆಕೈಲು ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಸ್ವಾಗತಿಸಿದರು. ಸಹಾಯಕ ಶಿಕ್ಷಕ ದಾಮೋದರ ಅಜ್ಜಾವರ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ಬಿಜೆಪಿ ಪ್ರಶಿಕ್ಷಣ ವರ್ಗ ಆರಂಭ

Suddi Udaya

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya

ಅಕ್ರಮ ಪ್ರವೇಶ ಮಾಡಿ ಯುವಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಎ.22: ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ “ಹರಿ ದರ್ಶನ” ಯಕ್ಷಗಾನ ಬಯಲಾಟ

Suddi Udaya
error: Content is protected !!