July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಡಿ.17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರಗಲಿರುವ ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ತಯಾರಿ ಹಿನ್ನೆಲೆಯಲ್ಲಿ, ಸಮ್ಮೇಳನದ ಸಂಯೋಜನಾ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರವರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಮಾರ್ಗದರ್ಶನ ನೀಡುವಂತೆ, ಸಮ್ಮೇಳನದ ಯಶಸ್ಸಿಗೆ ಪೂರ್ಣ ಸಹಕಾರಕ್ಕಾಗಿ ವಿನಂತಿಸಿಕೊಳ್ಳಲಾಯಿತು. ಶಾಸಕರು ಸಮ್ಮೇಳನದ ಮಾಹಿತಿಯನ್ನು ಪಡೆದುಕೊಂಡು, ಯಾವ ರೀತಿಯಲ್ಲಿ ತಯಾರಿ ನಡೆಸಬೇಕೆಂಬುದರ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಬಾರಿ ಸುವರ್ಣ ಕರ್ನಾಟಕ ವರ್ಷವಾದ್ದರಿಂದ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಮ್ಮ ಆಲೋಚನೆಗಳನ್ನು ಶಾಸಕರು ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸಂಯೋಜನಾ ಸಮಿತಿಯ ಅಧ್ಯಕ್ಷರಾದ ಜಯಾನಂದ ಗೌಡ ಪ್ರಜ್ವಲ್ ಬೆಳ್ತಂಗಡಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ ಯದುಪತಿ ಗೌಡ, ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು, ಸಂಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಗೌಡ, ಊಟೋಪಚಾರ ಸಮಿತಿಯ ಸಂಚಾಲಕರಾದ ಲಕ್ಷ್ಮೀನಾರಾಯಣ ಕೆ, ಸನ್ಮಾನ ಸಮಿತಿಯ ಸಂಚಾಲಕರಾದ ಲಕ್ಷ್ಮಣ ಪೂಜಾರಿ ಲ್ಯಾಲರವರು ಜೊತೆಗಿದ್ದರು.

Related posts

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!