September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ


ಪುಂಜಾಲಕಟ್ಟೆ: ಇಲ್ಲಿಯ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಕಾಲೇಜು ವಾರ್ಷಿಕೋತ್ಸವವು ಇತ್ತೀಚೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಮನಸ್ಸನ್ನು ಶಕ್ತಿಯುತಗೊಳಿಸಬೇಕೆಂದು ಹಿತವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಲೇಡಿಗೋಶನ್ ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ ಆರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಕಷ್ಟದ ಅನುಭವ ಪಡೆದಷ್ಟು ಹೆಚ್ಚು ಎತ್ತರಕ್ಕೆ ಏರುತ್ತಿರಿ ಎಂದು ಅನುಭವದ ಮಾತುಗಳಾಡಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ. ಶರತ್ ಕುಮಾರ್, ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸುಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿವಿಧ ಬಹುಮಾನಗಳನ್ನು ವಿತರಣೆ ಮಾಡಿದರು.

ಮಡಂತ್ಯಾರು ಹಾಲಿ ಅಧ್ಯಕ್ಷರಾದ ರೂಪ ನವೀನ್ ಅಧ್ಯಕ್ಷತೆ ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಕೆ ಪಿ ಎಸ್ ನ ಮುಖ್ಯೋಪಾಧ್ಯಾಯರುಗಳಾದ ಉದಯ್ ಕುಮಾರ್ ಮತ್ತು ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರಾದ ಹನೀಫ್ ಭಾಗವಹಿಸಿದ್ದರು. ಮಡಂತ್ಯಾರು ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀಮತಿ ಶಶಿಪ್ರಭಾ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಜಯಶ್ರೀ ಕೆ ಏನ್ ಮುದ್ರಿತ ವರದಿ ವಾಚಿಸಿದರು. ಉಪನ್ಯಾಸಕರಾದ ತಾಹೀರ ಬಾನು ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!