22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ


ಪುಂಜಾಲಕಟ್ಟೆ: ಇಲ್ಲಿಯ ಕೆ ಪಿ ಎಸ್ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಕಾಲೇಜು ವಾರ್ಷಿಕೋತ್ಸವವು ಇತ್ತೀಚೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ಮನಸ್ಸನ್ನು ಶಕ್ತಿಯುತಗೊಳಿಸಬೇಕೆಂದು ಹಿತವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಲೇಡಿಗೋಶನ್ ಆಸ್ಪತ್ರೆಯ ಮುಖ್ಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ ಆರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಕಷ್ಟದ ಅನುಭವ ಪಡೆದಷ್ಟು ಹೆಚ್ಚು ಎತ್ತರಕ್ಕೆ ಏರುತ್ತಿರಿ ಎಂದು ಅನುಭವದ ಮಾತುಗಳಾಡಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಡಾ. ಶರತ್ ಕುಮಾರ್, ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸುಕುಮಾರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿವಿಧ ಬಹುಮಾನಗಳನ್ನು ವಿತರಣೆ ಮಾಡಿದರು.

ಮಡಂತ್ಯಾರು ಹಾಲಿ ಅಧ್ಯಕ್ಷರಾದ ರೂಪ ನವೀನ್ ಅಧ್ಯಕ್ಷತೆ ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಕೆ ಪಿ ಎಸ್ ನ ಮುಖ್ಯೋಪಾಧ್ಯಾಯರುಗಳಾದ ಉದಯ್ ಕುಮಾರ್ ಮತ್ತು ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯರಾದ ಹನೀಫ್ ಭಾಗವಹಿಸಿದ್ದರು. ಮಡಂತ್ಯಾರು ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀಮತಿ ಶಶಿಪ್ರಭಾ ಉಪಸ್ಥಿತರಿದ್ದರು.

ಕಾಲೇಜು ಪ್ರಾಂಶುಪಾಲರು ಡಾ. ಸರೋಜಿನಿ ಆಚಾರ್ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕರಾದ ಜಯಶ್ರೀ ಕೆ ಏನ್ ಮುದ್ರಿತ ವರದಿ ವಾಚಿಸಿದರು. ಉಪನ್ಯಾಸಕರಾದ ತಾಹೀರ ಬಾನು ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Related posts

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya
error: Content is protected !!