September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ


ಬೆಳ್ತಂಗಡಿ: ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ 45ಸಾವಿರ ಮೌಲ್ಯದ 22.4 ಮಿಲಿ ಗ್ರಾಂ ತೂಕದ ಮಾದಕ ವಸ್ತು ಎಂ.ಡಿ.ಎಂ.ಎನ್ನು ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ ಘಟನೆ ನ.27ರಂದು ರಾತ್ರಿ ನಡೆದಿದೆ.

ಉರುವಾಲು ಗ್ರಾಮದ ಸುಶ್ರುತ ಕೃಷ್ಣ.ಜೆ.ಕೆ (32ವ), ನೆರಿಯ ಗ್ರಾಮದ ಸೆಬಾಸ್ಟಿಯನ್ (31ವ) ಹಾಗೂ ಕೇರಳ ಇಡುಕಿ ಜಿಲ್ಲೆ ವನ್ನಪುರಂ ಗ್ರಾಮ ತೋಡುಪುಯನಿವಾಸಿ ಅನಿಲ್ ತೋಮಸ್ (31ವ) ಎಂಬವರನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡಿದ್ದಾರೆ.

ನ. 27ರಂದು ರಾತ್ರಿ ಉಪ್ಪಿನಂಗಡಿ ಗ್ರಾಮದ ಮೆಕ್ಷಿಕೋ ಹೋಟೆಲ್ ಎದುರು ರಾ.ಹೆ ೭೫ರಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗಾಗಿ ವೆನ್ಯೂ ವಾಹನ ನಂಬ್ರ ಏಂ-21-Z-1864 ನೇ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ, ಸದರಿ ವಾಹನವನ್ನು ನಿಲ್ಲಿಸಿದ ಚಾಲಕ ಹಾಗೂ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಲು ಯತ್ನಿಸಿದಾಗ ಅವರನ್ನು ಹಿಡಿದುಕೊಂಡು ವಿಚಾರಿಸಿದಾಗ ಈ ಮಾದಕ ವಸ್ತು ಸಾಗಾಟ ಪ್ರಕರಣ ಬೆಳಕಿಗೆ ಬಂದಿತ್ತು.

ಕಾರಿನಲ್ಲಿದ್ದ ರೂ.45 ಸಾವಿರ ಮೌಲ್ಯದ ಮಾದಕ ವಸ್ತು ಎಂಡಿಎಂಎ ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ ೧೬೨/೨೦೨೩ ಕಲಂ: U/s-೮(ಛಿ) ೨೨(b) ಎನ್.ಡಿ.ಪಿ.ಎಸ್ ಕಾಯ್ದೆ ಡಿ/ತಿ ೩೪ iಠಿಛಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!