23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಬೃಹತ್ ಮರವೊಂದು ಮಂಗಳವಾರ ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದು ವಾಹನ ಸಂಚಾರ ಹಾಗೂ ಸಾರ್ವಜನಿಕರು ತೆರಳಲು ಕಷ್ಷವಾಗಿದೆ. ಮರಬಿದ್ದು ಕೆಲವು ತಾಸು ಕಳೆದರೂ ಸಂಭಂಧ ಪಟ್ಟವರಿಂದ ಮರ ತೆರವುಗೊಳಿಸುವ ಕೆಲಸ ಆಗಲಿಲ್ಲ.

ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ತೆರವುಗೊಳಿಸಲು ಸಾರ್ವಜನಿಕರು ಹಲವು ಬಾರಿ ಗ್ರಾಮ ಸಭೆಗಳಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೂ ಅರಣ್ಯ ಇಲಾಖೆ,ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ.ರಸ್ತೆ ಬದಿ ಅಪಾಯಕಾರಿ ಮರಗಳು ಬೆಳದಿದ್ದು ಇಲಾಖೆಯು ಮರ ತೆರವುಗೊಳಿಸುವ ಕೆಲಸ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು, ಬಳಂಜ ಗ್ರಾಮ ಪಂಚಾಯತ್ ಕೂಡಲೇ ಈ ಭಾಗದ ಮರಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ತೆರವುಗೊಳಿಸುವ ಕೆಲಸ ಮಾಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಬೆಳ್ತಂಗಡಿ: ಆರ್ ಐ ಪ್ರತೀಶ್ ಉಪ ತಹಶೀಲ್ದಾರ್ ಆಗಿ ಭಡ್ತಿಗೊಂಡು ಬಂಟ್ವಾಳ ತಾಲೂಕಿಗೆ ವರ್ಗಾವಣೆ

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya
error: Content is protected !!