September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!