April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಮರವೊಂದು ನ.28 ರಂದು ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಇಂದು ಬೆಳಿಗ್ಗೆ ಸಾರ್ವಜನಿಕರು ತೆರವುಗೊಳಿಸಿದರು.

ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಲೈನ್ ಮ್ಯಾನ್ ಜಟ್ಡಿಂಗ ರವರು ಆಗಮಿಸಿ ಪರಿಶೀಲಿಸಿದರು .ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ಅಪಾಯಕಾರಿ ಮರಗಳನ್ನು ಶೀಘ್ರವಾಗಿ ತೆರವುಗೊಳಿಸಲು ಸಾರ್ವಜನಿಕರು ಒತ್ತಾಯಿಸಿದರು. ಅರಣ್ಯ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರು ಮರ ತೆರವುಗೊಳಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಕಾಸಿಂ ಕಟ್ಟೆ, ಸಂತೋಷ್ ಪಿ ಕೋಟ್ಯಾನ್, ಜಗದೀಶ್ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಬಗ್ಯೋಟ್ಟು ಉಪಸ್ಥಿತರಿದ್ದರು .

Related posts

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya
error: Content is protected !!