23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

ಬೆಳ್ತಂಗಡಿ: ತಾಲೂಕಿನ ಬಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ಳಾಜೆ ಮತ್ತು ಡೆಂಜೋಲಿ ಸಂಪರ್ಕಿಸುವ ರಸ್ತೆಯ ಬಗ್ಯೋಟ್ಟು ಸಮೀಪ ಮರವೊಂದು ನ.28 ರಂದು ಸಂಜೆ ರಸ್ತೆಗೆ ಅಡ್ಡವಾಗಿ ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ಇಂದು ಬೆಳಿಗ್ಗೆ ಸಾರ್ವಜನಿಕರು ತೆರವುಗೊಳಿಸಿದರು.

ಸ್ಥಳಕ್ಕೆ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಲೈನ್ ಮ್ಯಾನ್ ಜಟ್ಡಿಂಗ ರವರು ಆಗಮಿಸಿ ಪರಿಶೀಲಿಸಿದರು .ಬೊಳ್ಳಾಜೆಯಿಂದ ಡೆಂಜೋಲಿ ತನಕ ರಸ್ತೆ ಬದಿ ಅಪಾಯಕಾರಿ ಮರಗಳು ಬೆಳೆದಿದ್ದು ಅಪಾಯಕಾರಿ ಮರಗಳನ್ನು ಶೀಘ್ರವಾಗಿ ತೆರವುಗೊಳಿಸಲು ಸಾರ್ವಜನಿಕರು ಒತ್ತಾಯಿಸಿದರು. ಅರಣ್ಯ ಅಧಿಕಾರಿ ಹಾಗೂ ಪಂಚಾಯತ್ ಅಧ್ಯಕ್ಷರು ಮರ ತೆರವುಗೊಳಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ ಕಾಸಿಂ ಕಟ್ಟೆ, ಸಂತೋಷ್ ಪಿ ಕೋಟ್ಯಾನ್, ಜಗದೀಶ್ ಪೂಜಾರಿ ಬಳ್ಳಿದಡ್ಡ, ರಕ್ಷಿತ್ ಬಗ್ಯೋಟ್ಟು ಉಪಸ್ಥಿತರಿದ್ದರು .

Related posts

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya
error: Content is protected !!