April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ರಾಜ್ಯ ಸರಕಾರದ ರೈತರು ತಮ್ಮ ಜಮೀನನ್ನು ಆಧಾರ್ ಲಿಂಕ್ ಮಾಡಿ ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಅವರು ನ.29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲಾ ರೈತರು ಫ್ರುಟ್ಸ್ ಐಡಿ ಮಾಡಿಸುವುದರಿಂದ ಪ್ರಾಕೃತಿಕ ವಿಕೋಪದಿಂದ ಬೆಳೆನಾಶವದಲ್ಲಿ ಸರಕಾರದಿಂದ ಈ ಯೋಜನೆಯ ಮೂಲಕ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ನಿರ್ದಿಷ್ಟ ಎಕರೆಗೆ ಈ ಯೋಜನೆ ಸೀಮಿತವಾಗುದಿಲ್ಲ. ತಮ್ಮ ಐಡಿಯನ್ನು ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ,. ತೋಟಾಗಾರಿಕೆ ಇಲಾಖೆಯಲ್ಲಿ ಸಂಪರ್ಕಿಸಬಹುದು. ಐಡಿ ಮಾಡಲು ಆಧಾರ್‌ಕಾರ್ಡ್ ಮತ್ತು ಬ್ಯಾಂಕ್‌ಪಾಸ್‌ ಪುಸ್ತಕದ ಅವ್ಯಶಕತೆಯಿದೆ ಎಂದರು.

ಲೋಕಸಭೆ ಚುನವಾಣೆ ಬರುತ್ತಿದೆ 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು. ನೋಂದವಾಣಿ ಮಾಡಲು 1/4/2024 ಕೊನೆಯ ದಿನಾಂಕವಾಗಿದ್ದು ತಮ್ಮ ಹೆಸರನ್ನು ಹತ್ತಿರ ಬಿಎಲ್‌ಓ, ಕಾಲೇಜಿನಲ್ಲಿ, ತಾಲೂಕು ಕಚೇರಿಯ ಚುನಾವಾಣಾ ಕೇಂದ್ರದಲ್ಲಿ ದಾಖಲೆಯನ್ನು ಸಲ್ಲಿಸಬಹುದು. ಕಡತ ವಿಲೇವಾರಿಗಳು ತಡೆಯಾಗುವುದನ್ನು ತಪ್ಪಿಸಲು ಇ ಆಫೀಸ್ ತೆರದಿದೆ. ಅಧಿಕಾರಿಗಳು ಕಂಪ್ಯೂಟರ್‌ನಲ್ಲಿ ಇದನ್ನು ಅಳವಡಿಸಿದ್ದು ಯಾವ ಅಧಿಕಾರಿಗಳ ಬಳಿ ಎಷ್ಟು ಕಡತಗಳು ಬಾಕಿವೆ ಎಂದು ತಿಳಿಯುತ್ತದೆ. ತಿಂಗಳಿಗೆ ಒಮ್ಮೆ ಎಷ್ಟು ಕಡತಗಳು ಬಾಕಿವೆ ಎಂದು ನೋಡಲಾಗುತ್ತದೆ. ಕಡತವನ್ನು ಸಲ್ಲಿಸುವರು ಅಧಿಕಾರಿಗಳಿಂದ ಇ ಆಫೀಸ್ ನಂಬ್ರವನ್ನು ಪಡೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

Related posts

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!