23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ರಾಜ್ಯ ಸರಕಾರದ ರೈತರು ತಮ್ಮ ಜಮೀನನ್ನು ಆಧಾರ್ ಲಿಂಕ್ ಮಾಡಿ ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಅವರು ನ.29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲಾ ರೈತರು ಫ್ರುಟ್ಸ್ ಐಡಿ ಮಾಡಿಸುವುದರಿಂದ ಪ್ರಾಕೃತಿಕ ವಿಕೋಪದಿಂದ ಬೆಳೆನಾಶವದಲ್ಲಿ ಸರಕಾರದಿಂದ ಈ ಯೋಜನೆಯ ಮೂಲಕ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ನಿರ್ದಿಷ್ಟ ಎಕರೆಗೆ ಈ ಯೋಜನೆ ಸೀಮಿತವಾಗುದಿಲ್ಲ. ತಮ್ಮ ಐಡಿಯನ್ನು ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ,. ತೋಟಾಗಾರಿಕೆ ಇಲಾಖೆಯಲ್ಲಿ ಸಂಪರ್ಕಿಸಬಹುದು. ಐಡಿ ಮಾಡಲು ಆಧಾರ್‌ಕಾರ್ಡ್ ಮತ್ತು ಬ್ಯಾಂಕ್‌ಪಾಸ್‌ ಪುಸ್ತಕದ ಅವ್ಯಶಕತೆಯಿದೆ ಎಂದರು.

ಲೋಕಸಭೆ ಚುನವಾಣೆ ಬರುತ್ತಿದೆ 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು. ನೋಂದವಾಣಿ ಮಾಡಲು 1/4/2024 ಕೊನೆಯ ದಿನಾಂಕವಾಗಿದ್ದು ತಮ್ಮ ಹೆಸರನ್ನು ಹತ್ತಿರ ಬಿಎಲ್‌ಓ, ಕಾಲೇಜಿನಲ್ಲಿ, ತಾಲೂಕು ಕಚೇರಿಯ ಚುನಾವಾಣಾ ಕೇಂದ್ರದಲ್ಲಿ ದಾಖಲೆಯನ್ನು ಸಲ್ಲಿಸಬಹುದು. ಕಡತ ವಿಲೇವಾರಿಗಳು ತಡೆಯಾಗುವುದನ್ನು ತಪ್ಪಿಸಲು ಇ ಆಫೀಸ್ ತೆರದಿದೆ. ಅಧಿಕಾರಿಗಳು ಕಂಪ್ಯೂಟರ್‌ನಲ್ಲಿ ಇದನ್ನು ಅಳವಡಿಸಿದ್ದು ಯಾವ ಅಧಿಕಾರಿಗಳ ಬಳಿ ಎಷ್ಟು ಕಡತಗಳು ಬಾಕಿವೆ ಎಂದು ತಿಳಿಯುತ್ತದೆ. ತಿಂಗಳಿಗೆ ಒಮ್ಮೆ ಎಷ್ಟು ಕಡತಗಳು ಬಾಕಿವೆ ಎಂದು ನೋಡಲಾಗುತ್ತದೆ. ಕಡತವನ್ನು ಸಲ್ಲಿಸುವರು ಅಧಿಕಾರಿಗಳಿಂದ ಇ ಆಫೀಸ್ ನಂಬ್ರವನ್ನು ಪಡೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya
error: Content is protected !!