July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ರಾಜ್ಯ ಸರಕಾರದ ರೈತರು ತಮ್ಮ ಜಮೀನನ್ನು ಆಧಾರ್ ಲಿಂಕ್ ಮಾಡಿ ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಅವರು ನ.29ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಎಲ್ಲಾ ರೈತರು ಫ್ರುಟ್ಸ್ ಐಡಿ ಮಾಡಿಸುವುದರಿಂದ ಪ್ರಾಕೃತಿಕ ವಿಕೋಪದಿಂದ ಬೆಳೆನಾಶವದಲ್ಲಿ ಸರಕಾರದಿಂದ ಈ ಯೋಜನೆಯ ಮೂಲಕ ನಿಮ್ಮ ಖಾತೆಗೆ ಹಣ ಜಮಾವಾಗುತ್ತದೆ. ನಿರ್ದಿಷ್ಟ ಎಕರೆಗೆ ಈ ಯೋಜನೆ ಸೀಮಿತವಾಗುದಿಲ್ಲ. ತಮ್ಮ ಐಡಿಯನ್ನು ದಾಖಲಿಸಲು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ,. ತೋಟಾಗಾರಿಕೆ ಇಲಾಖೆಯಲ್ಲಿ ಸಂಪರ್ಕಿಸಬಹುದು. ಐಡಿ ಮಾಡಲು ಆಧಾರ್‌ಕಾರ್ಡ್ ಮತ್ತು ಬ್ಯಾಂಕ್‌ಪಾಸ್‌ ಪುಸ್ತಕದ ಅವ್ಯಶಕತೆಯಿದೆ ಎಂದರು.

ಲೋಕಸಭೆ ಚುನವಾಣೆ ಬರುತ್ತಿದೆ 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು. ನೋಂದವಾಣಿ ಮಾಡಲು 1/4/2024 ಕೊನೆಯ ದಿನಾಂಕವಾಗಿದ್ದು ತಮ್ಮ ಹೆಸರನ್ನು ಹತ್ತಿರ ಬಿಎಲ್‌ಓ, ಕಾಲೇಜಿನಲ್ಲಿ, ತಾಲೂಕು ಕಚೇರಿಯ ಚುನಾವಾಣಾ ಕೇಂದ್ರದಲ್ಲಿ ದಾಖಲೆಯನ್ನು ಸಲ್ಲಿಸಬಹುದು. ಕಡತ ವಿಲೇವಾರಿಗಳು ತಡೆಯಾಗುವುದನ್ನು ತಪ್ಪಿಸಲು ಇ ಆಫೀಸ್ ತೆರದಿದೆ. ಅಧಿಕಾರಿಗಳು ಕಂಪ್ಯೂಟರ್‌ನಲ್ಲಿ ಇದನ್ನು ಅಳವಡಿಸಿದ್ದು ಯಾವ ಅಧಿಕಾರಿಗಳ ಬಳಿ ಎಷ್ಟು ಕಡತಗಳು ಬಾಕಿವೆ ಎಂದು ತಿಳಿಯುತ್ತದೆ. ತಿಂಗಳಿಗೆ ಒಮ್ಮೆ ಎಷ್ಟು ಕಡತಗಳು ಬಾಕಿವೆ ಎಂದು ನೋಡಲಾಗುತ್ತದೆ. ಕಡತವನ್ನು ಸಲ್ಲಿಸುವರು ಅಧಿಕಾರಿಗಳಿಂದ ಇ ಆಫೀಸ್ ನಂಬ್ರವನ್ನು ಪಡೆದುಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

Related posts

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!